News

ಪರೀಕ್ಷೆ ಬರೆಯುವಾಗ ಹೃದಯಾಘಾತಕ್ಕೆ ಬಲಿಯಾದ 9ನೇ ತರಗತಿ ವಿದ್ಯಾರ್ಥಿ……!

ಇತ್ತೀಚಿಗೆ ಅನೇಕರು ಹೃದಯಾಘಾತದಿಂದ ಇದ್ದಕ್ಕಿಂದ್ದಂತೆ ಬಲಿಯಾಗುತ್ತಿದ್ದಾರೆ. ಇದೀಗ ಪರೀಕ್ಷೆ ಬರೆಯುವ ಸಮಯದಲ್ಲಿ ಹೃದಯಾಘಾತದಿಂದ ಬಾಲಕನೋರ್ವ ಮೃತಪಟ್ಟಿದ್ದಾನೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹುಲ್ಯಾಳ ಎಂಬ ಗ್ರಾಮದ 15 ವರ್ಷ ವಯಸ್ಸಿನ ರಾಹುಲ್ ಕೋಲಕಾರ ಎಂಬ ಬಾಲಕ ಪರೀಕ್ಷೆ ಬರೆಯುವಾಗ ಮೃತಪಟ್ಟಿರುವ ಘಟನೆ ನಡೆದಿದೆ.

ಮೃತ ದುರ್ದೈವಿ ರಾಹುಲ್ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಹುಲ್ಯಾಳ ಗ್ರಾಮದ ಶಂಭುಲಿಂಗೇಶ್ವರ ಮಾದ್ಯಮಿಕ ಶಾಲೆಯಲ್ಲಿ ಓದುತ್ತಿದ್ದ. ಇನ್ನೂ ಪರೀಕ್ಷೆ ಬರೆಯುತ್ತಿರುವಾಗ ಹೃದಯಾಘಾತ ಸಂಭವಿಸಿದೆ. ಕೂಡಲೇ ಶಿಕ್ಷಕರು ಆತನ್ನನ್ನು ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ಸಹ ಮಾಡಲಾಗಿದೆ. ಆದರೆ ಮಾರ್ಗಮಧ್ಯೆಯೇ ಆತ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಇನ್ನೂ ಈ ಬಗ್ಗೆ ಶಾಲೆಯ ಶಿಕ್ಷಕ ಮಾಹಿತಿ ನೀಡಿದ್ದು, ನಿನ್ನೆ ಮಧ್ಯವಾರ್ಷಿಕ ಪರೀಕ್ಷೆ ಬರೆಯುವ ವೇಳೆ ವಿದ್ಯಾರ್ಥಿ ಸುಸ್ತಾಗಿ ಏಕಾಏಕಿ ಕುಸಿದು ಬಿದ್ದಿದ್ದಾನೆ. ಕೂಡಲೇ ನಾವು ಬಾಲಕನ ಪೋಷಕರಿಗೂ ಸಹ ಮಾಹಿತಿ ನೀಡಿ ಆತನಿಗೆ ಪ್ರಾಥಮಿಕ ಚಿಕಿತ್ಸೆ ಸಹ ಕೊಡಿಸಿದ್ದೇವೆ.

ಇನ್ನೂ ಶಾಲೆಗೆ ಸ್ಥಳೀಯವಾಗಿ ಲಭ್ಯವಿದ್ದ ವೈದ್ಯರನ್ನು ಕರೆಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದೆವು, ಬಳಿಕ ಆತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಂಬ್ಯಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದುಕೊಂಡು ಹೋಗಲು ವ್ಯವಸ್ಥೆ ಮಾಡಲಾಯಿತು. ಆದರೆ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇ ವಿದ್ಯಾರ್ಥಿ ಮೃತಪಟ್ಟಿದ್ದಾನೆ ಎಂದು ಹೇಳಲಾಗಿದೆ. ಇನ್ನೂ ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು.

Most Popular

To Top