ಸದ್ಯ ಐ.ಪಿ.ಎಲ್ ಕ್ರಿಕೆಟ್ ಪಂದ್ಯಾವಳಿಗಳು ನಡೆಯುತ್ತಿದ್ದು, RCB ತಂಡ ಸೋಲು ಕಾಣುತ್ತಿದೆ. ಇದಕ್ಕೆ ಕಾರಣ ಅಶ್ವಿನಿ ಪುನೀತ್ ರಾಜ್ ಕುಮಾರ್ ರವರೇ ಕಾರಣ. ಅವರು ಬಂದು ಆರ್.ಸಿ.ಬಿ ತಂಡದ ಜೆರ್ಸಿ ಉದ್ಘಾಟನೆ ಮಾಡಿದ ಕಾರಣದಿಂದಲೇ RCB ಸೋಲುತ್ತಿದೆ ಎಂದು ಅವರ ವಿರುದ್ದ ಅವಹೇಳನಕಾರಿಯಾಗಿ ಟ್ವೀಟ್ ಮಾಡಲಾಗಿತ್ತು. ಇದೀಗ ಈ ಕುರಿತು ಅಪ್ಪು ಹುಡುಗರು ಕರ್ನಾಟಕ ವತಿಯಿಂದ ಪೊಲೀಸ್ ಆಯುಕ್ತರಿಗೆ ದೂರು ನೀಡಲಾಗಿದೆ.
ಕಳೆದ ಮಾಚ್ 19 ರಂದು ದಿವಂಗತ ಪುನೀತ್ ರಾಜ್ ಕುಮಾರ್ ರವರ ಪತ್ನಿ ಅಶ್ವಿನಿ ರವರು ಬೆಂಗಳೂರಿನ ಆರ್.ಸಿ.ಬಿ ತಂಡದ ಜೆರ್ಸಿ ಉದ್ಘಾಟನೆ ಕಾರ್ಯಕ್ರಮಕ್ಕೆ ಹೋಗಿದ್ದರು. ಈ ಕಾರ್ಯಕ್ರಮದ ಬಳಿಕ ಐಪಿಎಲ್ ಪಂದ್ಯಾವಳಿಗಳಲ್ಲಿ ಆರ್.ಸಿ.ಬಿ ತಂಡ ಕೆಲ ಪಂದ್ಯಗಳಲ್ಲಿ ಸೋತಿದೆ. ಇದರಿಂದ ದರ್ಶನ್ ಅಭಿಮಾನಿಗಳು ಸಾಮಾಜಿಕ ಜಾಲತಾಣ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಗಜ ಪಡೆ ಎಂಬ ನಕಲಿ ಖಾತೆ ಸೃಷ್ಟಿಸಿ ಅದರಲ್ಲಿ ಅಶ್ವಿನಿ ಪುನೀತ್ ರಾಜ್ ಕುಮಾರ್ ರವರು ಆ ಕಾರ್ಯಕ್ರಮಕ್ಕೆ ಬಂದ ಕಾರಣದಿಂದಲೇ ಆರ್.ಸಿ.ಬಿ ಸೋಲುಗಳಿಗೆ ಕಾರಣ ಎಂದು ಅವರನ್ನು ಕೆಟ್ಟದಾಗಿ ನಿಂದಿಸಿ ಪೋಸ್ಟ್ ಮಾಡಲಾಗಿತ್ತು. ಈ ಪೋಸ್ಟ್ ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ವೈರಲ್ ಆಗಿತ್ತು. ಜೊತೆಗೆ ದುರಂಹಕಾರ ಹಾಗೂ ಮೌಢ್ಯತೆಯ ಪರಮಾವಧಿ ಎಂದು ಅನೇಕರು ಆ ಪೋಸ್ಟ್ ವಿರುದ್ದ ಕಿಡಿಕಾರಿದ್ದರು. ಈ ಹಿನ್ನೆಲೆಯಲ್ಲಿ ಅಪ್ಪು ಹುಡುಗರು ವತಿಯಿಂದ ಪೊಲೀಸರಿಗೆ ದೂರು ನೀಡಿ ತಪ್ಪಿತಸ್ಥರ ವಿರುದ್ದ ಕ್ರಮ ವಹಿಸಬೇಕೆಂದು ಆಗ್ರಹಿಸಿದ್ದಾರೆ.
ಇನ್ನೂ ಅಶ್ವಿನಿ ಪುನೀತ್ ರಾಜ್ ಕುಮಾರ್ ರವರ ಬಗ್ಗೆ ನಿಂದನಾತ್ಮಕ ಪೋಸ್ಟ್ ಕುರಿತು ಸಾರ್ವಜನಿಕ ವಲಯದಲ್ಲಿ ವಿರೋಧ ವ್ಯಕ್ತವಾಗುತ್ತಿದ್ದಂತೆ ಆ ನಕಲಿ ಖಾತೆಯ ಹೆಸರನ್ನು ಸುಧೀಪ್ ಅಭಿಮಾ ಎಂದು ಬದಲಾಯಿಸಿದ್ದಾರೆ. ಆ ಮೂಲಕ ಸುದೀಪ್ ಹಾಗೂ ಅಪ್ಪು ಅಬೀಮಾನಿಗಳ ನಡುವೆ ಭಿನ್ನಾಭಿಪ್ರಾಯ ಸೃಷ್ಟಿಯಾಗುವಂತೆ ಮಾಡಿದ್ದಾರೆ. ಅಶ್ವಿನಿ ಪುನೀತ್ ರಾಜ್ ಕುಮಾರ್ ಹಾಗೂ ಸುದೀಪ್ ಅವರಿಗೆ ಅವಮಾನ ಮಾಡಿದ್ದಾರೆ. ಈ ಘಟನೆಯಿಂದ ಕರ್ನಾಟಕದ ರಾಜವಂಶದ ಅಭಿಮಾನಿಗಳಿಗೆ ತುಂಬಾ ನೋವು ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಕೂಡಲೇ ನಕಲಿ ಖಾತೆ ಸೃಷ್ಟಿಸಿದ ವ್ಯಕ್ತಿಯನ್ನು ಬಂಧಿಸಿ ಆತನ ವಿರುದ್ದ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ದೂರಿನಲ್ಲಿ ಬರೆಯಲಾಗಿದೆ.