News

ಕರ್ನಾಟಕದಿಂದ ಸ್ಪರ್ಧೆ ಮಾಡಲಿದ್ದಾರಂತೆ ತಮಿಳುನಾಡು ಬಿಜೆಪಿ ನಾಯಕ ಅಣ್ಣಾಮಲೈ, ವೈರಲ್ ಆದ ಸುದ್ದಿ…..!

ಇನ್ನೇನು ಕೆಲವೇ ದಿನಗಳಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ. ಈಗಾಗಲೇ ರಾಜಕೀಯ ಪಕ್ಷಗಳು ಚುನಾವಣಾ ಪ್ರಚಾರಕ್ಕಿಳಿದಿದ್ದಾರೆ. ಶತಾಯಗತಾಯ ಈ ಬಾರಿ ಬಿಜೆಪಿ ಪಕ್ಷವನ್ನು ಸೋಲಿಸಲು ಕಾಂಗ್ರೇಸ್ ಶತಪ್ರಯತ್ನಗಳನ್ನು ಸಹ ಮಾಡುತ್ತಿದೆ. ಎರಡೂ ಪಕ್ಷಗಳ ನಾಯಕರ ನಡುವೆ ಮಾತಿನ ಮಹಾಯುದ್ದ ಸಹ ನಡೆಯುತ್ತಿದೆ. ಇದೀಗ ಬಿಜೆಪಿ ಪಕ್ಷದಿಂದ ಅಣ್ಣಾಮಲೈ ಕರ್ನಾಟಕದಿಂದ ಸ್ಪರ್ಧೆ ಮಾಡಲಿದ್ದಾರೆ ಎಂಬ ಸುದ್ದಿಯೊಂದು ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ.

ಲೋಕಸಭಾ ಚುನಾವಣೆ ನಿಮಿತ್ತ ಗೆಲ್ಲುವಂತಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತಿದ್ದಾರೆ. ಬಿಜೆಪಿ ಪಕ್ಷದಿಂದಲೂ ಸಹ ಗೆಲ್ಲುವಂತಹ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲು ಎಲ್ಲಾ ರೀತಿಯ ಪ್ರಯತ್ನಗಳನ್ನು ಸಹ ಮಾಡುತ್ತಿದ್ದಾರೆ. ತಂತ್ರ-ರಣತಂತ್ರಗಳನ್ನು ಮಾಡುತ್ತಿದ್ದಾರೆ. ಕರ್ನಾಟಕದಲ್ಲಿ ದೊಡ್ಡ ಹೆಸರು ಮಾಡಿದ್ದ ಅಣ್ಣಾಮಲೈ ರವರನ್ನು ಕರ್ನಾಟಕದ ಯಾವುದಾದರೂ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸಲು ಬಿಜೆಪಿ ಪಕ್ಷ ಪ್ಲಾನ್ ಮಾಡಲಿದೆ ಎನ್ನಲಾಗಿದೆ. ಕರ್ನಾಟಕದಲ್ಲಿ ಖಡಕ್ ಪೊಲೀಸ್ ಅಧಿಕಾರಿಯಾಗಿ ಕೆಲಸ ಮಾಡಿದ ಅಣ್ಣಾಮಲೈರವರನ್ನು ಸಿಂಗಂ ಅಣ್ಣಾಮಲೈ ಎಂದೇ ಕರೆಯುತ್ತಿದ್ದರು. ತಮ್ಮ ಪೊಲೀಸ್ ಹುದ್ದೆಗೆ ರಾಜಿನಾಮೆ ನೀಡಿ ತಮಿಳುನಾಡಿನಲ್ಲಿ ಬಿಜೆಪಿ ಪಕ್ಷವನ್ನು ಬಲಪಡಿಸುವ ಕೆಲಸದಲ್ಲಿ ನಿರತರರಾಗಿದ್ದಾರೆ.

ಸದ್ಯ ಕರ್ನಾಟಕದಿಂದ ಲೋಕಸಭೆ ಚುನವಾಣೆಯಲ್ಲಿ ಅಣ್ಣಾಮಲೈ ಸ್ಪರ್ಧೆ ಮಾಡುತ್ತಾರೆ ಎಂಬ ಸುದ್ದಿಯೊಂದು ಭಾರಿ ಸದ್ದು ಮಾಡುತ್ತಿದೆ. ಅದರಲ್ಲೂ ಕರಾವಳಿ ಭಾಗದಿಂದ ಅಣ್ಣಾಮಲೈರವರನ್ನು ಕಣಕ್ಕಿಳಿಸಲು ಸಿದ್ದತೆಗಳು ನಡೆಯುತ್ತಿದೆ ಎನ್ನಲಾಗಿದೆ. ಇನ್ನೂ ನವೀನ್ ಕುಮಾರ್‍ ಕಟೀಲ್ ರವರ ವಿರುದ್ದ ದಕ್ಷಿಣ ಕನ್ನಡದ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಸಮಾಧಾನ ಸಹ ಇದೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಈ ಕ್ಷೇತ್ರದಿಂದಲೇ ಕಟೀಲ್ ರವರ ಬದಲಿಗೆ ಅಣ್ಣಾಮಲೈರವರನ್ನು ಕಣಕ್ಕಿಳಿಸಲು ಚರ್ಚೆ ನಡೆದಿದೆ ಎನ್ನಲಾಗುತ್ತಿದೆ. ಸದ್ಯ ಈ ಸುದ್ದಿ ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಸಿದೆ. ಈ ಭಾರಿ ಕಳೆದ ಚುನಾವಣೆಗಿಂತ ದೊಡ್ಡ ಗೆಲುವು ಸಾಧಿಸಬೇಕೆಂಬ ನಿಟ್ಟಿನಲ್ಲಿ ಕಮಲ ಪಾಳೆಯ ಅಭ್ಯರ್ಥಿಗಳ ಆಯ್ಕೆಯಲ್ಲೂ ಸಹ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎನ್ನಲಾಗಿದೆ.

Most Popular

To Top