News

ಹೆಣ್ಣು ಮಕ್ಕಳು ನಮ್ಮ ಮನೆಗೆ ಸುರಕ್ಷಿತವಾಗಿ ವಾಪಸ್ಸಾಗುವ ಗ್ಯಾರಂಟಿ ಯಾವಾಗ ಕೊಡ್ತೀರಾ ಎಂದು ಸಿಎಂ ಗೆ ಪ್ರಶ್ನೆ ಮಾಡಿದ ಬಿಜೆಪಿ ಮುಖಂಡ ಸಿ.ಟಿ.ರವಿ……!

ಕರ್ನಾಟಕದ ಹುಬ್ಬಳಿಯಲ್ಲಿ ಯುವಕನೋರ್ವ ವಿದ್ಯಾರ್ಥಿಯನ್ನು ಭೀಕರವಾಗಿ ಕಾಲೇಜಿನ ಕ್ಯಾಂಪಸ್ ನಲ್ಲೆ ಕೊಲೆ ಮಾಡಿರುವ ಘಟನೆ ರಾಜ್ಯವನ್ನು ಬೆಚ್ಚಿ ಬೀಳಿಸಿದೆ. ಹುಬ್ಬಳಿಯ ಬಿವಿಬಿ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಈ ಕುರಿತು ಇಡೀ ರಾಜ್ಯದಾದ್ಯಂತ ಭಾರಿ ಆಕ್ರೋಷ ವ್ಯಕ್ತವಾಗುತ್ತಿದೆ. ಈ ಕುರಿತು ಮಾಜಿ ಸಚಿವ ಸಿ.ಟಿ.ರವಿ ರಾಜ್ಯ ಸರ್ಕಾರದ ವಿರುದ್ದ ಕಿಡಿ ಕಾರಿದ್ದಾರೆ.

ಹುಬ್ಬಳಿ ನಗರಪಾಲಿಕೆಯ ಕಾಂಗ್ರೇಸ್ ಸಸದ್ಯ ನಿರಂಜನ್ ಹಿರೇಮಠ ರವರ ಪುತ್ರಿ ನೇಹಾ ಕೊಲೆಯಾದ ವಿದ್ಯಾರ್ಥಿನಿ ಎಂದು ಗುರ್ತಿಸಲಾಗಿದೆ. ಹುಬ್ಬಳಿಯ ಬಿವಿಬಿ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಸಿಎ ವಿದ್ಯಾಭ್ಯಾಸ ಮಾಡುತ್ತಿದ್ದ ನೇಹಾಳನ್ನು ಅದೇ ಕಾಲೇಜಿನ ವಿದ್ಯಾರ್ಥಿ ಫೈಜಲ್ ಎಂಬಾತ 9 ಬಾರಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ. ಗಂಭೀರವಾಗಿ ಗಾಯಗೊಂಡ ನೇಹಾಳನ್ನು ಆಸ್ಪತ್ರೆಗೆ ದಾಖಲು ಮಾಡುವಷ್ಟರಲ್ಲಿ ನೇಹಾ ಮೃತಪಟ್ಟಿದ್ದಾಳೆ. ಬೆಳಗಾವಿ ಜಿಲ್ಲೆಯ ಸವದತ್ತಿ ನಿವಾಸಿಯಾಗಿದ್ದ ಫೈಜಲ್ ಕೆಲವು ದಿನಗಳಿಂದ ನೇಹಾಳನ್ನು ಪ್ರೀತಿಸುವಂತೆ ಹಿಂದೆ ಬಿದ್ದಿದ್ದ ಎನ್ನಲಾಗಿದೆ. ಆದರೆ ನೇಹಾ ಆತನನ್ನು ನೀರಾಕರಿಸಿದ್ದಕ್ಕೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಕೊಲೆ ಮಾಡಿ ಪರಾರಿಯಾಗುತ್ತಿದ್ದ ಫೈಜಲ್ ನನ್ನು ಅಲ್ಲಿಯೇ ಇದ್ದ ಕೆಲ ವ್ಯಕ್ತಿಗಳು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಸದ್ಯ ಫೈಜಲ್ ನನ್ನು ಹುಬ್ಬಳಿಯ ವಿದ್ಯಾನಗರ ಪೊಲೀಸರು ಬಂಧಿಸಿ ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಇನ್ನೂ ಈ ಘಟನೆ ಹುಬ್ಬಳಿ ಮಾತ್ರವಲ್ಲದೇ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಈ ಕುರಿತು ಬಿಜೆಪಿ ಮುಖಂಡ ಮಾಜಿ ಸಚಿವ ಸಿ.ಟಿ.ರವಿ ರಾಜ್ಯ ಸರ್ಕಾರದ ವಿರುದ್ದ ಕಿಡಿ ಕಾರಿದ್ದಾರೆ. ಮುಖ್ಯಮಂತ್ರಿಗಳೇ ರಾಜ್ಯದಲ್ಲಿ ಎಂತಹ ಪರಿಸ್ಥಿತಿ ನಿರ್ಮಾಣವಾಗಿದೆ, ಕಾನೂನು ಸುವ್ಯವಸ್ಥೆ ಎಲ್ಲಿದೆ, ಮನೆಯಿಂದ ಹೊರ ಬಂದ ನಮ್ಮ ಮಕ್ಕಳು ಮನೆಯನ್ನು ಸುರಕ್ಷಿತವಾಗಿ ಸೇರುವ ಗ್ಯಾರಂಟಿಯನ್ನು ಯಾವಾಗ ಕೊಡ್ತೀರಾ. ಬದುಕುವಂತಹ ಹಾಗೂ ಸುರಕ್ಷತೆಯ ಗ್ಯಾರಂಟಿ ಕೊಡದ ನಿಮ್ಮ ಸರ್ಕಾರದ ಮೇಲೆ ಯಾವ ಭರವಸೆಯೂ ಇಲ್ಲ ಎಂದು ಟ್ವೀಟ್ ಮಾಡಿದ್ದಾರೆ.

Most Popular

To Top