News

ಸ್ವಾಭಿಮಾನಿ ರಾಜಕಾರಣಿ, ಚಾಮರಾಜನಗರ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ಇನ್ನಿಲ್ಲ…..!

ಸ್ವಾಭಿಮಾನಿ ರಾಜಕಾರಣಿ ಹಾಗೂ ಚಾಮರಾಜನಗರ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ಏ.29 ರ ರಾತ್ರಿ 1.20ಕ್ಕೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಬಹು ಅಂಗಾಗ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಕಳೆದೆರಡು ದಿನಗಳ ಹಿಂದೆಯಷ್ಟೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿತ್ತು. ಐಸಿಯು ನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಇಂದು (ಏ.29) ರ ಮಧ್ಯರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಶ್ರೀನಿವಾಸ ಪ್ರಸಾದ್ ರವರು ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಅವರ ಕುಟುಂಬಸ್ಥರು ಹಾಗೂ ಬೆಂಬಲಿಗರು, ರಾಜಕಾರಣಿಗಳು ಸಂತಾಪ ಸೂಚಿಸುತ್ತಿದ್ದಾರೆ.

ಕಳೆದ ಮಾರ್ಚ್ ಮಾಹೆಯಲ್ಲಿ ರಾಜಕೀಯದಿಂದ ನಿವೃತ್ತಿ ಹೊಂದುವುದಾಗಿ ಸಂಸದ ವಿ.ಶ್ರೀನಿವಾಸ ಪ್ರಸಾದ್ ರವರು ಘೋಷಣೆ ಮಾಡಿದ್ದರು. ಅವರನ್ನು ಚುನಾವಣಾ ಪ್ರಚಾರಕ್ಕೆ ಆಹ್ವಾನಿಸಲು ಬಿಜೆಪಿ ಹಾಗೂ ಕಾಂಗ್ರೇಸ್ ಎರಡೂ ಪಕ್ಷಗಳು ಮುಂದಾಗಿದ್ದವು. ಅವರ ಮನೆಗೆ ತೆರಳಿ ಸಭೆಗಳನ್ನು ಸಹ ನಡೆಸಿದ್ದು. ಆದರೆ ಅವರು ಅನಾರೋಗ್ಯದ ಕಾರಣದಿಂದ ಪ್ರಚಾರಕ್ಕೆ ಹೋಗದಿರಲು ನಿರ್ಧಾರ ತೆಗೆದುಕೊಂಡಿದ್ದರು. ಕೆಲವು ದಿನಗಳಿಂದ ಶ್ರೀನಿವಾಸ ಪ್ರಸಾದ್ ರವರ ಆರೋಗ್ಯದಲ್ಲಿ ತುಂಬಾ ಏರುಪೇರಾಗಿತ್ತು. ಈ ಕಾರಣದಿಂದ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ವೈದ್ಯರು ಅವರನ್ನು ಗುಣಮುಖರನ್ನಾಗಿ ಮಾಡಲು ತುಂಬಾ ಶ್ರಮವಹಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಹಲೋಕ ತ್ಯೆಜಿಸಿದ್ದಾರೆ. ಮೈಸೂರಿನ ಜಯಲಕ್ಷ್ಮೀಪುರಂ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಇನ್ನೂ ಶ್ರೀನಿವಾಸ ಪ್ರಸಾದ್ ಪುತ್ರಿ ಪೂರ್ಣಿಮಾ ಪ್ರಸಾದ್ ಮಾತನಾಡಿ, ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಿದ ಬಳಿಕ ಸ್ವಲ್ಪ ಚೇತರಿಕೆ ಕಂಡಿದ್ದರು. ಎಲ್ಲರ ಜೊತೆಗೆ ಚೆನ್ನಾಗಿ ಮಾತನಾಡಿದ್ದರು. ಭಾನುವಾರದಿಂದ ಮಾತನಾಡಲು ಆಗುತ್ತಿರಲಿಲ್ಲ. ಅವರಿಗೆ ಪೆನ್ನು ಪೇಪರ್‍ ಕೊಟ್ಟಿದ್ವಿ. ಅವರು ಪೇಪರ್‍ ನಲ್ಲಿ ಕಾಫಿ ಎಂದು ಬರೆದಿದ್ದರು. ಎರಡು ಗುಟುಕು ಕಾಫಿ ಕುಡಿದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿಧನರಾದರು. ಇನ್ನೂ ನಮ್ಮ ತಂದೆ ಸದಾ ಸಂತೋಷವಾಗಿದ್ದರು. ನನ್ನ ಸಾವಾದರೂ ನಗುತ್ತಾ ಕಳುಹಿಸಿಕೊಡಿ ಎಂದು ಹೇಳಿದ್ದರು. ಅದೇ ರೀತಿ ಅವರನ್ನು ಕಳುಹಿಸಿಕೊಡೋಣ ಎಂದು ಮನವಿ ಮಾಡಿದ್ದರು.

Most Popular

To Top