News

ಬಹು ಅಂಗಾಂಗ ವೈಫಲ್ಯದಿಂದ ಮಣಿಪಾಲ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಚಿವ ಶ್ರೀನಿವಾಸ್ ಪ್ರಸಾದ್….!

ಕರ್ನಾಟಕದ ಹಿರಿಯ ರಾಜಕಾರಣಿ ಚಾಮರಾಜನಗರದ ಹಾಲಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ರವರು ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದು, ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಿದ್ದು, ಐಸಿಯುನಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

76ವರ್ಷ ವಯಸ್ಸಿನ ಕರ್ನಾಟಕದ ಹಿರಿಯ ರಾಜಕಾರಣಿ ಚಾಮರಾಜನಗರ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ವಿ.ಶ್ರೀನಿವಾಸ ಪ್ರಸಾದ್ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದು, ಬಹುಅಂಗಾಗ ವೈಫಲ್ಯದಿಂದ ಬಳಲುತ್ತಿದ್ದಾರೆ. ಈ ಕಾರಣದಿಂದ ಅವರನ್ನು ಕೂಡಲೇ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಶನಿವಾರ (ಏ.೨೭)ರ ಸಂಜೆ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸದ್ಯ ಅವರ ಆರೋಗ್ಯ ಸ್ಥೀತಿ ಗಂಭಿರವಾಗಿದೆ ಎಂದು ಕೆಲವೊಂದು ಮೂಲಗಳಿಂದ ತಿಳಿದುಬಂದಿದೆ.

ಇನ್ನೂ ಮಣಿಪಾಲ್ ಆಸ್ಪತ್ರೆಯ ವೈದ್ಯರು ನೀಡಿದ ಮಾಹಿತಿಯಂತೆ ಶ್ರೀನಿವಾಸ್ ಪ್ರಸಾದ್ ರವರು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಶುಗರ್‍ ಹಾಗೂ ಬಿಪಿಯಲ್ಲಿ ಏರುಪೇರಾಗಿದೆ. ಆದರೆ ಅವರು ಚಿಕಿತ್ಸೆ ಸ್ಪಂಧಿಸುತ್ತಿದ್ದಾರೆ. ತಜ್ಞ ವೈದ್ಯರ ನಿಗಾದಲ್ಲಿ ಚಿಕಿತ್ಸೆ ಮುಂದುವರೆಯುತ್ತಿದೆ ಎಂದು ತಿಳಿಸಿದ್ದಾರೆ. ಇನ್ನೂ ಕಳೆದ 2019ರಲ್ಲಿ ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಅವರು ಬಿಜೆಪಿ ಪಕ್ಷದಿಂದ ಸ್ಪರ್ಧೆ ಮಾಡಿ ಜಯಗಳಿಸಿದ್ದರು. ಆದರೆ ಕಳೆದ ಮಾರ್ಚ್ ನಲ್ಲಿ ಅವರು ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದರು. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಅವರು ಬಿಜೆಪಿ ಪರವಾಗಲಿ ಅಥವಾ ಕಾಂಗ್ರೇಸ್ ಪರವಾಗಿ ಪ್ರಚಾರ ಮಾಡಿಲ್ಲ.

Most Popular

To Top