News

ರಾಜ್ಯದ ಹಲವು ಕಡೆ ಭಾರಿ ಮಳೆಯ ಮುನ್ಸೂಚನೆ, ಬೆಂಗಳೂರಿನಲ್ಲಿ ಮಳೆಯ ಸಿಂಚನ….!

ಕರ್ನಾಟಕದಾದ್ಯಂತ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆ ನೀಡಿದೆ. ಕೆಲವು ದಿನಗಳಿಂದ ರಾಜ್ಯದ ಹಲವು ಕಡೆ ಮಳೆಯಿಲ್ಲದೇ ಬರದ ಚಾಯೆ ಮೂಡಿದೆ. ಇದೀಗ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಹವಾಮಾನ ಇಲಾಖೆ ನೀಡಿದೆ.

ಕರ್ನಾಟಕ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆಯಂತೆ. ನಿನ್ನೆ ಸಹ ಬೆಂಗಳೂರಿನಲ್ಲಿ ಕೆಲವೊಂದು ಕಡೆ ಹಗುರವಾದ ಮಳೆಯಾಗಿದೆ. ಇಂದು ಸಹ ಮೋಡಕವಿದ ವಾತಾವರಣವಿದ್ದು, ಸಂಜೆ ಸಮಯದಲ್ಲಿ ಕೆಲವೊಂದು ಕಡೆ ಮತ್ತೆ ಮಳೆಯ ಸಿಂಚನವಾಗಿದೆ. ರಾಜ್ಯದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್‍, ರಾಯಚೂರು, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ವಿಜಯಪುರ, ಯಾದಗಿರಿ ಸೇರಿದಂತೆ ಬಳ್ಳಾರಿಯಲ್ಲೂ ಸಹ ಮಳೆಯಾಗಲಿದೆ.

ಇನ್ನೂ ಚಿಕ್ಕಬಳ್ಳಾಪುರ, ಕೋಲಾರ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಅಭಾವ ಕಾಡುತ್ತಿದೆ. ಮಳೆಯ ಅಭಾವದಿಂದ ಅನೇಕ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬರದ ಚಾಯೆ ಸಹ ಮೂಡಿದೆ. ಇದೀಗ ಮತ್ತೆ ಮಳೆಯಾಗುವ ಸೂಚನೆ ಹವಾಮಾನ ಇಲಾಖೆ ಸೂಚಿಸಿದೆ. ಅನೇಕ ಕಡೆ ರೈತರು ಮಳೆಗಾಗಿ ದೇವರ ಮೊರೆ ಹೋಗಿದ್ದಾರೆ.

Most Popular

To Top