News

ಪ್ರೀತಿಸಿ ಮದುವೆಯಾದ ಪ್ರೇಮಿಗಳು, ಯುವಕನ ಪೋಷಕರ ಮೇಲೆ ಯುವತಿ ಕಡೆಯವರಿಂದ ಮಾರಾಣಾಂತಿಕ ಹಲ್ಲೆ……!

ಚಿಕ್ಕಬಳ್ಳಾಪುರದ ಗುಡಿಬಂಡೆ ತಾಲೂಕಿನ ದಪ್ಪರ್ತಿ ಗ್ರಾಮದ ಮನೋಜ್ ಹಾಗೂ ಅಂಕಿತಾ ಎಂಬ ಜೋಡಿ ಸುಮಾರು ದಿನಗಳಿಂದ ಪ್ರೀತಿಸುತ್ತಿದ್ದು, ಮನೆ ಬಿಟ್ಟು ಓಡಿಹೋಗಿ ಭಾನುವಾರ ಮದುವೆಯಾಗಿದ್ದಾರೆ. ಈ ಕಾರಣದಿಂದ ಆಕ್ರೋಷಗೊಂಡ ಅಂಕಿತಾ ಕುಟುಂಬಸ್ಥರು ಯುವಕನ ತಂದೆ-ತಾಯಿ ಮನೆ ಮೇಲೆ ಧಾಳಿ ನಡೆಸಿ ಮಾರಾಣಾಂತಿಕ ಹಲ್ಲೆ ನಡೆಸಿರುವ ಘಟನೆ ಗುಡಿಬಂಡೆ ಪೊಲೀಸ್ ಠಾಣಾ ವ್ಯಾಫ್ತಿಯಲ್ಲಿ ನಡೆದಿದೆ.

ಸುಮಾರು ದಿನಗಳಿಂದ ಪ್ರೀತಿಸುತ್ತಿದ್ದ ದಪ್ಪರ್ತಿ ಗ್ರಾಮದ ಮನೋಜ್ ಹಾಗೂ ಅಂಕಿತಾ ಕಳೆದ ಭಾನುವಾರ ದೇವಾಲಯವೊಂದರಲ್ಲಿ ಮದುವೆಯಾಗಿದ್ದಾರೆ. ಅಂಕಿತಾ ಮದುವೆಯಾದ ವಿಚಾರ ತಿಳಿಯುತ್ತಿದ್ದಂತೆ ಆಕೆಯ ಕುಟುಂಬಸ್ಥರು ಆಕ್ರೋಷಗೊಂಡಿದ್ದಾರೆ. ಸೋಮವಾರ ಮದ್ಯಾಹ್ನದ ವೇಳೆಗೆ ಅಂಕಿತಾ ಕುಟುಂಬಸ್ಥರು ಯುವಕನ ಮನೆಯ ಮೇಲೆ ಧಾಳಿ ಮಾಡಿದ್ದಾರೆ. ಮನೋಜ್ ತಾಯಿ ವೆಂಕಟಲಕ್ಷ್ಮಮ್ಮ ಹಾಗೂ ತಂದೆ ಗಂಗರಾಜು ಎಂಬುವವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ.

ಇನ್ನೂ ಗಾಯಾಳುಗಳನ್ನು ಚಿಕ್ಕಬಳ್ಳಾಪುರದ ಗುಡಿಬಂಡೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಯುವಕ ಯುವತಿ ಪರಾರಿಯಾಗಲು ಯುವಕನ ಪೋಷಕರು ಬೆಂಬಲ ನೀಡಿದ್ದಾರೆ ಎಂಬ ಆಕ್ರೋಷದಲ್ಲಿ ಈ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಗುಡಿಬಂಡೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್.ಐ.ಆರ್‍ ದಾಖಲಾಗಿದೆ. ಕೆಲವು ದಿನಗಳ ಹಿಂದೆಯಷ್ಟೆ ಬೆಳಗಾವಿಯಲ್ಲಿ ಪ್ರೇಮವಿವಾಹ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನ ತಾಯಿಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಲಾಗಿತ್ತು. ಈ ಪ್ರಕರಣ ಮಾಸುವ ಮುನ್ನವೇ ಗುಡಿಬಂಡೆಯ ದಪ್ಪರ್ತಿ ಗ್ರಾಮದಲ್ಲಿ ಅಂತಹುದೇ ಘಟನೆ ನಡೆದಿದೆ ಎನ್ನಲಾಗಿದೆ.

Most Popular

To Top