News

ಜೈ ಶ್ರೀರಾಮ್ ಘೋಷಣೆ ಕೂಗಿದ ಹಿಂದೂ ಯುವಕರ ಮೇಲೆ ಅನ್ಯ ಕೋಮಿನ ಯುವಕರಿಂದ ಹಲ್ಲೆ, ಪ್ರಕರಣ ದಾಖಲು…..!

ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ ಕಾರಣದಿಂದ ಹಿಂದೂ ಯುವಕರ ಕಾರನ್ನು ಅಡ್ಡಗಟ್ಟಿದ ಮುಸ್ಲಿಂ ಯುವಕರ ಗುಂಪೊಂದು ಇಲ್ಲಿ ಶ್ರೀರಾಮ್ ಅನ್ನೋ ಹಾಗಿಲ್ಲ, ಒನ್ಲಿ ಅಲ್ಲಾ, ಅಲ್ಲಾ ಹು ಅಕ್ಬರ್ ಎಂದೆ ಹೇಳಬೇಕು ಎಂದು ಹಿಂದೂ ಯುವಕರ ಮೇಲೆ ಹಲ್ಲೆ ಮಾಡಿದ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ ನಡೆದಿದ್ದು, ಈ ಸಂಬಂಧ ಪ್ರಕರಣ ದಾಖಲು ಮಾಡಿದ್ದು, ಹಲ್ಲೆ ಮಾಡಿದ ಯುವಕರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಬೆಂಗಳೂರಿನ ಚಿಕ್ಕಬೆಟ್ಟಹಳ್ಳಿಯಲ್ಲಿ ಬುಧವಾರ (ಏ.17) ರಂದು ಕಾರಿನಲ್ಲಿ ಹೋಗುತ್ತಿದ್ದ ಹಿಂದೂ ಯುವಕರು ಜೈ ಶ್ರೀರಾಮ್ ಎಂಬ ಘೋಷಣೆ ಕೂಗಿದ್ದಕ್ಕಾಗಿ ಅವರ ಮೇಲೆ ಹಲ್ಲೆ ನಡೆಸಲಾಗಿದೆ. ಮೂವರು ಬಾಲಕರು ಕಾರಿನಲ್ಲಿ ಹೋಗುತ್ತಿದ್ದಾಗ ಜೈ ಶ್ರೀರಾಮ್ ಎಂದು ಕೂಗಿದ್ದಾರೆ. ಈ ವೇಳೆ ಬೈಕ್ ನಲ್ಲಿ ಹೋಗುತ್ತಿದ್ದ ಮುಸ್ಲೀಂ ಯುವಕರು ಕಾರನ್ನು ತಡೆದು ಅವರ ಮೇಲೆ ಗಲಾಟೆ ಮಾಡಿದ್ದಾರೆ. ಬಳಿಕ ಕಾರಿನ ಬಳಿ ಬಂದು ಏನು ನೀವು ಜೈ ಶ್ರೀರಾಮ್ ಎಂದು ಹೇಳಬೇಕಾ, ಇಲ್ಲಿ ಜೈ ಶ್ರೀರಾಮ್ ಇಲ್ಲಾ, ಒನ್ಲಿ ಅಲ್ಲಾ, ಅಲ್ಲಾ ಹು ಅಕ್ಬರ್‍ ಎಂದು ಮಾತ್ರ ಹೇಳಬೇಕು ಎಂದು ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆ. ಅಷ್ಟೇಅಲ್ಲದೇ ಕಾರು ಹಾಗೂ ನಮ್ಮ ಕೈಯಲ್ಲಿದ್ದ ಕೇಸರಿ ಭಾವುಟವನ್ನು ಕಿತ್ತು ಹಾಕಿದ್ದಾರೆ.

ಇನ್ನೂ ಕಾರಿನಲ್ಲಿದ್ದ ಯುವಕರು ನಮ್ಮ ಹಬ್ಬ ನಾವು ಏನಾದ್ರೂ ಮಾಡಿಕೊಳ್ಳತೀವಿ, ನಿಮ್ಮ ಹಬ್ಬದಲ್ಲಿ ಹೀಗೆ ಮಾಡ್ತೀವಾ, ನಿಮ್ಮ ಹಬ್ಬದಲ್ಲಿ ಬಂದು ನಾವು ಹೀಗೆ ಮಾಡ್ತೀವಾ ಎಂದು ಪ್ರಶ್ನೆ ಸಹ ಮಾಡಿದ್ದಾರೆ. ಮಾತಿಗೆ ಮಾತು ಬೆಳೆದು ಎರಡೂ ಗುಂಪುಗಳ ನಡುವೆ ಗಲಾಟೆ ಜೋರಾಗಿದೆ. ಇಬ್ಬರ ನಡುವೆ ಮಾರಾಮಾರಿ ನಡೆದಿದೆ. ಬೈಕ್ ನಲ್ಲಿದ್ದ ಇಬ್ಬರು ಮುಸ್ಲೀಂ ಯುವಕರ ಜೊತೆ ಅಲ್ಲಿಯೇ ಇದ್ದ ಮತ್ತಿಬ್ಬರು ಮುಸ್ಲೀಂ ಯುವಕರು ಸೇರಿ ಕಾರಿನಲ್ಲಿ ಬಂದಿದ್ದವರ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಬಳಿಕ ಕಾರಿನಲ್ಲಿದ್ದ ಯುವಕರು ವಿದ್ಯಾರಣ್ಯಪುರ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದು, ಅವರು ನೀಡಿದ ದೂರಿನ ಮೇರೆಗೆ ಹಲ್ಲೆ ಮಾಡಿದವರನ್ನು ಹುಡುಕಲು ಪೊಲೀಸರು ಬಲೆ ಬೀಸಿದ್ದಾರೆ.

Most Popular

To Top