News

ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ಕೊಟ್ಟ ಶಾಸಕ ಶಾಮನೂರು, ಕಿಡಿ ಕಾರಿದ ಸೈನಾ ನೆಹ್ವಾಲ್…..!

ಕಳೆದೆರಡು ದಿನಗಳ ಹಿಂದೆಯಷ್ಟೆ ಶಾಸಕ ಶಾಮನೂರು ಶಿವಶಂಕರಪ್ಪ ಮಾತನಾಡಲು ಬಾರದ ಇವರು ಅಡುಗೆ ಮಾಡೋದಕ್ಕೆ ಮಾತ್ರ ಲಾಯಕ್ಕು, ಅವರಿಗೆ ಮಾತನಾಡುವ ಶಕ್ತಿಯಿಲ್ಲ ಎಂದು ಸಿದ್ದೇಶ್ವರ್‍ ಪತ್ನಿಯ ವಿರುದ್ದ ನಾಲಿಗೆ ಹರಿಬಿಟ್ಟಿದ್ದರು. ಅವರ ಹೇಳಿಕೆಗೆ ಇಡೀ ದೇಶದಾದ್ಯಂತ ಆಕ್ರೋಷ ವ್ಯಕ್ತವಾಗುತ್ತಿದ್ದು, ಅವರ ಹೇಳಿಕೆಗೆ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಕಿಡಿಕಾರಿದ್ದಾರೆ.

ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ತಮ್ಮ ಎಕ್ಸ್ (ಟ್ವಿಟರ್‍) ಖಾತೆಯ ಮೂಲಕ ಶಾಮನೂರು ಶಿವಶಂಕರಪ್ಪ ಹೇಳಿಕೆಯ ಬಗ್ಗೆ ಕಿಡಿ ಕಾರಿದ್ದಾರೆ. ನಾನು ಭಾರತಕ್ಕಾಗಿ ಪದಕಗಳನ್ನು ಗೆದ್ದಾಗ ನಾನು ಏನು ಮಾಡಬೇಕು ಎಂದು ಕಾಂಗ್ರೇಸ್ ಪಕ್ಷ ಆದ್ಯತೆ ನೀಡುತ್ತಿತ್ತು. ಮಹಿಳೆಯರು ತಮಗೆ ಇಷ್ಟವಾದ ಕ್ಷೇತ್ರದಲ್ಲಿ ದೊಡ್ಡದನ್ನು ಸಾಧಿಸಬೇಕೆಂದು ಕನಸು ಕಾಣುತ್ತಿರುವಾಗ ಈ ರೀತಿಯಾಗಿ ಹೇಳುವುದು ಏಕು? ಒಂದಡೆ ನಾರಿ ಶಕ್ತಿ ಕೋ ವಂದನ್ ಮಾಡುತ್ತಿದ್ದೇವೆ. ನಮ್ಮ ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸಲಾಗಿದೆ. ಸ್ತ್ರೀ ದ್ವೇಷದ ಜನ ಇರುವುದು ನಿಜಕ್ಕೂ ಅಸಮಾಧಾನ ಎಂದು ಶಾಮನೂರು ಶಿವಶಂಕರಪ್ಪ ರನ್ನು ಸ್ತ್ರೀ ದ್ವೇಷಿ ಎಂದು ಬರೆದುಕೊಂಡಿದ್ದಾರೆ.

ಇತ್ತೀಚಿಗೆ ದಾವಣಗೆರೆ ಭಂಟರ ಭವನದಲ್ಲಿ ನಡೆದ ಕಾಂಗ್ರೇಸ್ ಜನಪ್ರತಿನಿಧಿಗಳು ಹಾಗೂ ಮುಖಂಡರ ಸಭೆಯಲ್ಲಿ ಶಾಮನೂರು ಶಿವಶಂಕರಪ್ಪ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದರು. ಮಾತನಾಡು ಬಾರದ ಇವರು ಅಡುಗೆ ಮಾಡೋದಕ್ಕೆ ಲಾಯಕ್ಕು, ಅವರಿಗೆ ಮಾತನಾಡುವ ಶಕ್ತಿ ಇಲ್ಲ ಎಂದು ಸಂಸದ ಸಿದ್ದೇಶ್ವರ್‍ ರವರ ಪತ್ನಿ ವಿರುದ್ದ ಮಾತನಾಡಿದ್ದರು. ಜೊತೆಗೆ ಮೋದಿ ಮೋದಿ ಎಂದು ಬಿಜೆಪಿಯವರು ಹೇಳ್ತಾರೆ, ಆದರೆ ಕರ್ನಾಟಕಕ್ಕೆ ಮೋದಿಯವರ ಕೊಡುಗೆ ಏನು, ನಮ್ಮ ರಾಜ್ಯಕ್ಕೆ ಬರಬೇಕಾದ ಹಣ ನೀಡದೇ ಅನ್ಯಾಯ ಮಾಡಿದ್ದಾರೆ ಎಂದು ಹೇಳಿದ್ದರು. ಬಿಜೆಪಿ ಪಕ್ಷ ಶಾಮನೂರು ಶಿವಶಂಕರಪ್ಪ ರವರ ವಿರುದ್ದ ಚುನಾವಣಾ ಆಯೋಗಕ್ಕೆ ದೂರು ಸಹ ನೀಡಿದೆ.

Most Popular

To Top