Film News

ಗಾಯಗೊಂಡಿರುವುದಾಗಿ ಪೋಸ್ಟ್ ಮಾಡಿದ ನಟಿ ರೇಣು ದೇಸಾಯಿ, ಬೇಗ ಗುಣಮುಖರಾಗಿ ಎಂದ ಫ್ಯಾನ್ಸ್, ಅಷ್ಟಕ್ಕೂ ಆಗಿದ್ದೇನು?

ಸೌತ್ ಸಿನಿರಂಗದಲ್ಲಿ ಅನೇಕ ಸಿನೆಮಾಗಳ ಮೂಲಕ ಫೇಂ ಪಡೆದುಕೊಂಡ ರೇಣು ದೇಸಾಯಿ ನಟ ಪವರ್‍ ಸ್ಟಾರ್‍ ಪವನ್ ಕಲ್ಯಾಣ್ ಮದುವೆಯಾಗಿ ವಿಚ್ಚೇಧನ ಪಡೆದುಕೊಂಡು ಸದ್ಯ ಆಕೆ ತಮ್ಮ ಮಕ್ಕಳೊಂದಿಗೆ ಇದ್ದಾರೆ. ಪವನ್ ಜೊತೆಗೆ ಬೇರೆಯಾದ ಬಳಿಕ ಆಕೆ ಪುಣೆಯಲ್ಲಿ ಮಕ್ಕಳೊಂದಿಗೆ ಸೆಟಲ್ ಆಗಿದ್ದಾರೆ. ಮಕ್ಕಳೊಂದಿಗೆ ಜೀವನ ಕಳೆಯುತ್ತಾ ಸಾಗುತ್ತಿದ್ದಾರೆ. ಇದೀಗ ಆಕೆ ಮತ್ತೆ ಸಿನೆಮಾಗಳತ್ತ ಮುಖ ಮಾಡಿದ್ದು, ಟೈಗರ್‍ ನಾಗೇಶ್ವರ್‍ ರಾವ್ ಸಿನೆಮಾದ ಮೂಲಕ ರೀ ಎಂಟ್ರಿ ಕೊಡಲಿದ್ದಾರೆ. ಇದೀಗ ಆಕೆ ಗಾಯಗೊಂಡಿರುವುದಾಗಿ ಸೋಷಿಯಲ್ ಮಿಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ಅಭಿಮಾನಿಗಳು ಆತಂಕಗೊಂಡಿದ್ದಾರೆ. ಅಷ್ಟಕ್ಕೂ ನಡೆದಿದ್ದಾರೂ ಏನು ಎಂಬ ವಿಚಾರಕ್ಕೆ ಬಂದರೇ,

ಸುಮಾರು ವರ್ಷಗಳ ಬಳಿಕ ನಟಿ ರೇಣು ದೇಸಾಯಿ ಮಾಸ್ ಮಹಾರಾಜ ಟೈಗರ್‍ ನಾಗರೇಶ್ವರ್‍ ರಾವ್ ಎಂಬ ಸಿನೆಮಾದ ಮೂಲಕ ಸಿನಿರಂಗಕ್ಕೆ ಎಂಟ್ರಿ ಕೊಡಲಿದ್ದಾರೆ. ಈ ಸಿನೆಮಾದಲ್ಲಿ ರವಿತೇಜ ಸಹೋದರಿ ಪಾತ್ರದಲ್ಲಿ ನಟಿಸಲಿದ್ದಾರೆ. ಇನ್ನೂ ಸೋಷಿಯಲ್ ಮಿಡಿಯಾದಲ್ಲೂ ಸಹ ರೇಣು ದೇಸಾಯಿ ಪುಲ್ ಆಕ್ಟೀವ್ ಆಗಿರುತ್ತಾರೆ. ಸೋಷಿಯಲ್ ಮಿಡಿಯಾದಲ್ಲಿ ತಮ್ಮ ವೈಯುಕ್ತಿಕ ವಿಚಾರಗಳು, ಮಕ್ಕಳ ಬಗ್ಗೆ ಅನೇಕ ವಿಚಾರಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಅದರಲ್ಲೂ ಹೆಚ್ಚಾಗಿ ತಮ್ಮ ಮಕ್ಕಳ ಬಗ್ಗೆ ವಿಚಾರಗಳನ್ನು ಶೇರ್‍ ಮಾಡುತ್ತಿರುತ್ತಾರೆ. ಕೆಲವು ದಿನಗಳ ಹಿಂದೆಯಷ್ಟೆ  ಅಕಿರಾನಂದನ್ ವರ್ಕೌಟ್ಸ್ ಮಾಡುತ್ತಿರುವ ವಿಡಿಯೋ ಪೋಸ್ಟ್ ಮಾಡಿದ್ದಾರೆ. ಅವನನ್ನು ನೋಡಿ ನನಗೆ ತುಂಬಾ ಗರ್ವವಾಗಿದೆ ಎಂದು ಪೋಸ್ಟ್ ಮಾಡಿದ್ದಾರೆ.

ಇನ್ನೂ ರೇಣು ದೇಸಾಯಿ ಮತ್ತೊಂದು ಪೋಸ್ಟ್ ಹಂಚಿಕೊಂಡಿದ್ದಾರೆ. ಈ ಪೋಸ್ಟ್ ನೋಡಿದ ಅಭಿಮಾನಿಗಳು ಶಾಕ್ ಆಗಿದ್ದಾರೆ. ಎರಡು ದಿನಗಳ ಹಿಂದೆ ತನ್ನ ಕಾಲಿಗೆ ತೀವ್ರವಾದ ಗಾಯಗೊಂಡಿದ್ದಾರಂತೆ. ಅದರಿಂದ ತನ್ನ ಕಾಲಿನ ಮೂರು ಬೆರಳುಗಳಿಗೆ ಪೆಟ್ಟಾಗಿದೆ. ಈ ಕುರಿತು ಸೋಷಿಯಲ್ ಮಿಡಿಯಾದಲ್ಲಿ ತನಗೆ ಗಾಯವಾಗಿರುವ ಬಗ್ಗೆ ತಿಳಿಸುತ್ತಾ ಪೋಸ್ಟ್ ಮಾಡಿದ್ದಾರೆ. ಗಾಯವಾದರೂ ಸಹ ಲೆಕ್ಕಿಸದೇ ಆಕೆ ಬೀಚ್ ನಲ್ಲಿ ಎಂಜಾಯ್ ಮಾಡಿದ್ದಾರೆ. ಆದರೆ ಆಕೆಯ ಕಾಲಿಗೆ ಯಾವ ರೀತಿ ಗಾಯವಾಯ್ತು ಎಂಬುದನ್ನು ಮಾತ್ರ ಆಕೆ ಹೇಳಿಲ್ಲ. ಇನ್ನೂ ಈ ವಿಡಿಯೋ ಇದೀಗ ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಅಭಿಮಾನಿಗಳು ಬೇಗ ಗುಣಮುಖರಾಗಿ, ಎಚ್ಚರಿಕೆ ತೆಗೆದುಕೊಳ್ಳಿ ಎಂದು ಸಲಹೆಗಳನ್ನು ನೀಡುತ್ತಿದ್ದಾರೆ.

Most Popular

To Top