ರಾಜ್ಯದಾದ್ಯಂತ ಕಾವೇರಿಯ ಕಿಚ್ಚು ಜೊರಾಗಿಯೇ ಇದ್ದು, ಈಗಾಗಲೇ ಅನೇಕ ಸಂಘಟನೆಗಳು ಜೋರಾಗಿಯೇ ಪ್ರತಿರೋಧ ವ್ಯಕ್ತಪಡಿಸುತ್ತಾ ಪ್ರತಿಭಟನೆಗಳನ್ನು ಮಾಡುತ್ತಿದ್ದಾರೆ. ಕಳೆದೆರಡು ದಿನಗಳ ಹಿಂದೆಯಷ್ಟೆ ಬೆಂಗಳೂರು ಬಂದ್ ಸಹ ನಡೆಸಲಾಗಿತ್ತು. ಇದೀಗ ಸೆ.29 ರಂದು ಇಡೀ ಕರ್ನಾಟಕ ಬಂದ್ ಮಾಡಲು ಅನೇಕ ಸಂಘಟನೆಗಳು ಮುಂದಾಗಿದೆ. ಇದೀಗ ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ರಜನಿಕಾಂತ್ ರವರಿಗೆ ವಾಟಾಲ್ ನಾಗರಾಜ್ ಎಚ್ಚರಿಕೆ ಕೊಟ್ಟಿದ್ದಾರೆ.
ಕರ್ನಾಟಕ ಹಾಗೂ ತಮಿಳುನಾಡಿನ ನಡುವೆ ಕಾವೇರಿ ನದಿ ನೀರು ಹಂಚಿಕೆ ವಿವಾದ ಸುಮಾರು ದಿನಗಳಿಂದ ನಡೆಯುತ್ತಿಲೇ ಇದೆ. ಈ ಬಗ್ಗೆ ಈಗಾಗಲೇ ಕನ್ನಡ ಸಿನಿರಂಗದ ಅನೇಕರು ಬೆಂಬಲ ಸಹ ಸೂಚಿಸಿದ್ದಾರೆ. ಇದೀಗ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಸೂಪರ್ ಸ್ಟಾರ್ ರಜನಿಕಾಂತ್ ರವರಿಗೆ ಎಚ್ಚರಿಕೆ ನೀಡಿದ್ದಾರೆ. ಈಗಾಗಲೇ ಸೆ.29 ರಂದು ಕರ್ನಾಟಕ ಬಂದ್ ಗೆ ಕನ್ನಡಪರ ಸಂಘಟನೆಗಳು ತೀರ್ಮಾನ ತೆಗೆದುಕೊಂಡಿದ್ದು, ಈ ಬಗ್ಗೆ ರಜನಿಕಾಂತ್ ರವರು ತಮ್ಮ ನಿಲು ಪ್ರಕಟ ಮಾಡಬೇಕೆಂದು ವಾಟಾಳ್ ನಾಗರಾಜ್ ಆಗ್ರಹ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾತನಾಡಿದ ವಾಟಾಲ್ ನಾಗರಾಜ್, ರಜನಿಕಾಂತ್ ರವರು ಕರ್ನಾಟಕದಲ್ಲಿ ಹುಟ್ಟಿದ್ದು, ಎರಡೂ ರಾಜ್ಯಗಳ ನಡುವಿನ ದಶಕಗಳ ನೀರು ಹಂಚಿಕೆ ವಿವಾದದ ಬಗ್ಗೆ ಧ್ವನಿ ಎತ್ತಬೇಕು. ಈ ವಿಚಾರದಲ್ಲಿ ಅವರು ತಮ್ಮ ನಿಲುವು ಪ್ರಕಟ ಮಾಡದೇ ಇದ್ದರೇ ಅವರು ಕರ್ನಾಟಕಕ್ಕೆ ಬರಬಾರದು. ಅವರನ್ನು ಕರ್ನಾಟಕಕ್ಕೆ ನಿಷೇಧ ಹೇರಬೇಕು. ಅವರ ಸಿನೆಮಾಗಳನ್ನೂ ಸಹ ನಿಷೇಧ ಮಾಡಬೇಕು ಕರ್ನಾಟಕದಲ್ಲಿ ಹುಟ್ಟಿ ಕಾವೇರಿ ನೀರು ಕುಡಿದು ಸೂಪರ್ ಸ್ಟಾರ್ ಆಗಿರುವ ಅವರು ಈ ಬಗ್ಗೆ ಮಾತನಾಡಬೇಕು ಎಂದು ಆಗ್ರಹ ವ್ಯಕ್ತಪಡಿಸಿದ್ದಾರೆ.
ಇನ್ನೂ ಶುಕ್ರವಾರ ನಡೆಯಲಿರುವ ಕರ್ನಾಟಕ ಬಂದ್ ಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಬೆಂಬಲ ನೀಡುವಂತೆ ಒತ್ತಾಯಿಸಿದ್ದಾರೆ. ಈ ಹಿಂದೆ ಸಹ ಕನ್ನಡ ಕಲಾವಿದರು ಕಾವೇರಿ ವಿವಾದದ ಬಗ್ಗೆ ಧ್ವನಿ ಎತ್ತದ ಕಾರಣ ಕನ್ನಡ ನಟರ ಬಗ್ಗೆ ಸೋಷಿಯಲ್ ಮಿಡಿಯಾದಲ್ಲೂ ಭಾರಿ ವಿರೋಧ ವ್ಯಕ್ತವಾಗಿತ್ತು. ಬಳಿಕ ಶಿವರಾಜ್ ಕುಮಾರ್, ಸುದೀಪ್, ದರ್ಶನ್, ರಾಗಿಣಿ ದ್ವಿವೇದಿ ಸೇರಿದಂತೆ ಅನೇಕ ನಟರು ಕಾವೇರಿ ಸಮಸ್ಯೆಯ ಬಗ್ಗೆ ಧ್ವನಿ ಎತ್ತಿದ್ದಾರೆ.
ರಾಜ್ಯದಾದ್ಯಂತ ಕಾವೇರಿಯ ಕಿಚ್ಚು ಜೊರಾಗಿಯೇ ಇದ್ದು, ಈಗಾಗಲೇ ಅನೇಕ ಸಂಘಟನೆಗಳು ಜೋರಾಗಿಯೇ ಪ್ರತಿರೋಧ ವ್ಯಕ್ತಪಡಿಸುತ್ತಾ ಪ್ರತಿಭಟನೆಗಳನ್ನು ಮಾಡುತ್ತಿದ್ದಾರೆ. ಕಳೆದೆರಡು ದಿನಗಳ ಹಿಂದೆಯಷ್ಟೆ ಬೆಂಗಳೂರು ಬಂದ್ ಸಹ ನಡೆಸಲಾಗಿತ್ತು. ಇದೀಗ ಸೆ.29 ರಂದು ಇಡೀ ಕರ್ನಾಟಕ ಬಂದ್ ಮಾಡಲು ಅನೇಕ ಸಂಘಟನೆಗಳು ಮುಂದಾಗಿದೆ. ಇದೀಗ ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ರಜನಿಕಾಂತ್ ರವರಿಗೆ ವಾಟಾಲ್ ನಾಗರಾಜ್ ಎಚ್ಚರಿಕೆ ಕೊಟ್ಟಿದ್ದಾರೆ.
ಕರ್ನಾಟಕ ಹಾಗೂ ತಮಿಳುನಾಡಿನ ನಡುವೆ ಕಾವೇರಿ ನದಿ ನೀರು ಹಂಚಿಕೆ ವಿವಾದ ಸುಮಾರು ದಿನಗಳಿಂದ ನಡೆಯುತ್ತಿಲೇ ಇದೆ. ಈ ಬಗ್ಗೆ ಈಗಾಗಲೇ ಕನ್ನಡ ಸಿನಿರಂಗದ ಅನೇಕರು ಬೆಂಬಲ ಸಹ ಸೂಚಿಸಿದ್ದಾರೆ. ಇದೀಗ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಸೂಪರ್ ಸ್ಟಾರ್ ರಜನಿಕಾಂತ್ ರವರಿಗೆ ಎಚ್ಚರಿಕೆ ನೀಡಿದ್ದಾರೆ. ಈಗಾಗಲೇ ಸೆ.29 ರಂದು ಕರ್ನಾಟಕ ಬಂದ್ ಗೆ ಕನ್ನಡಪರ ಸಂಘಟನೆಗಳು ತೀರ್ಮಾನ ತೆಗೆದುಕೊಂಡಿದ್ದು, ಈ ಬಗ್ಗೆ ರಜನಿಕಾಂತ್ ರವರು ತಮ್ಮ ನಿಲು ಪ್ರಕಟ ಮಾಡಬೇಕೆಂದು ವಾಟಾಳ್ ನಾಗರಾಜ್ ಆಗ್ರಹ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾತನಾಡಿದ ವಾಟಾಲ್ ನಾಗರಾಜ್, ರಜನಿಕಾಂತ್ ರವರು ಕರ್ನಾಟಕದಲ್ಲಿ ಹುಟ್ಟಿದ್ದು, ಎರಡೂ ರಾಜ್ಯಗಳ ನಡುವಿನ ದಶಕಗಳ ನೀರು ಹಂಚಿಕೆ ವಿವಾದದ ಬಗ್ಗೆ ಧ್ವನಿ ಎತ್ತಬೇಕು. ಈ ವಿಚಾರದಲ್ಲಿ ಅವರು ತಮ್ಮ ನಿಲುವು ಪ್ರಕಟ ಮಾಡದೇ ಇದ್ದರೇ ಅವರು ಕರ್ನಾಟಕಕ್ಕೆ ಬರಬಾರದು. ಅವರನ್ನು ಕರ್ನಾಟಕಕ್ಕೆ ನಿಷೇಧ ಹೇರಬೇಕು. ಅವರ ಸಿನೆಮಾಗಳನ್ನೂ ಸಹ ನಿಷೇಧ ಮಾಡಬೇಕು ಕರ್ನಾಟಕದಲ್ಲಿ ಹುಟ್ಟಿ ಕಾವೇರಿ ನೀರು ಕುಡಿದು ಸೂಪರ್ ಸ್ಟಾರ್ ಆಗಿರುವ ಅವರು ಈ ಬಗ್ಗೆ ಮಾತನಾಡಬೇಕು ಎಂದು ಆಗ್ರಹ ವ್ಯಕ್ತಪಡಿಸಿದ್ದಾರೆ.
ಇನ್ನೂ ಶುಕ್ರವಾರ ನಡೆಯಲಿರುವ ಕರ್ನಾಟಕ ಬಂದ್ ಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಬೆಂಬಲ ನೀಡುವಂತೆ ಒತ್ತಾಯಿಸಿದ್ದಾರೆ. ಈ ಹಿಂದೆ ಸಹ ಕನ್ನಡ ಕಲಾವಿದರು ಕಾವೇರಿ ವಿವಾದದ ಬಗ್ಗೆ ಧ್ವನಿ ಎತ್ತದ ಕಾರಣ ಕನ್ನಡ ನಟರ ಬಗ್ಗೆ ಸೋಷಿಯಲ್ ಮಿಡಿಯಾದಲ್ಲೂ ಭಾರಿ ವಿರೋಧ ವ್ಯಕ್ತವಾಗಿತ್ತು. ಬಳಿಕ ಶಿವರಾಜ್ ಕುಮಾರ್, ಸುದೀಪ್, ದರ್ಶನ್, ರಾಗಿಣಿ ದ್ವಿವೇದಿ ಸೇರಿದಂತೆ ಅನೇಕ ನಟರು ಕಾವೇರಿ ಸಮಸ್ಯೆಯ ಬಗ್ಗೆ ಧ್ವನಿ ಎತ್ತಿದ್ದಾರೆ.
Recommended for you