Film News

ವಿಜಯಕಾಂತ್ ಅಂತಿಮ ದರ್ಶನಕ್ಕೆ ಬಂದ ಸ್ಟಾರ್ ನಟ ದಳಪತಿ ವಿಜಯ್ ಮೇಲೆ ಚಪ್ಪಲಿ ಎಸೆತ, ವೈರಲ್ ಆದ ಪೊಟೋಸ್, ವಿಡಿಯೋ…!

ನಿನ್ನೆಯಷ್ಟೆ (ಡಿ.28) ತಮಿಳು ಸಿನಿರಂಗದ ಹಿರಿಯ ನಟ ಹಾಗೂ ರಾಜಕಾರಣಿ ವಿಜಯಕಾಂತ್ ಅನಾರೋಗ್ಯದ ನಿಮಿತ್ತ ಮೃತಪಟ್ಟಿದ್ದಾರೆ. ಅನೇಕ ಸಿನೆಮಾ ನಟರು, ರಾಜಕೀಯ ಮುಖಂಡರು ವಿಜಯಕಾಂತ್ ರವರ ಅಂತಿಮ ದರ್ಶನ ಪಡೆದು ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥನೆ ಮಾಡಿದ್ದಾರೆ. ನಟ ದಳಪತಿ ವಿಜಯ್ ಸಹ ವಿಜಯಕಾಂತ್ ರವರ ಅಂತಿಮ ದರ್ಶನಕ್ಕೆ ಆಗಮಿಸಿದ್ದು, ಈ ವೇಳೆ ಯಾರೋ ದುಷ್ಕರ್ಮಿಗಳು ದಳಪತಿ ವಿಜಯ್ ಮೇಲೆ ಚಪ್ಪಲಿ ಎಸೆದಿದ್ದಾರೆ. ಈ ಸಂಬಂಧ ವಿಡಿಯೋ ಹಾಗೂ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿವೆ.

ಕಾಲಿವುಡ್ ಹಿರಿಯ ನಟ ಹಾಗೂ ಡಿಎಂಡಿಕೆ ನಾಯಕ ವಿಜಯಕಾಂತ್ ಅವರು ಕೋವಿಡ್ ಕಾರಣದಿಂದ ಮೃತಪಟ್ಟಿದ್ದಾರೆ. ಕೋವಿಡ್ ನಿಂದ ಬಳಲುತ್ತಿದ್ದ ಅವರು ಚೆನೈನ ಮಿಯೋಟ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕೋವಿಡ್ ಗೆ ತುತ್ತಾದ ಬಳಿಕ ಅವರಿಗೆ ಚೆನೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ. ಚೆನೈನಲ್ಲಿ ವಿಜಯಕಾಂತ್ ರವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಈ ವೇಳೆ ದಳಪತಿ ವಿಜಯ್ ಕಿಕ್ಕಿರಿದು ತುಂಬಿದ್ದ ಜನಗಳ ಮದ್ಯೆ ಬಂದು ವಿಜಯಕಾಂತ್ ರವರ ದರ್ಶನ ಪಡೆದು ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ. ಈ ವೇಳೆ ಜನಗಳ ಮಧ್ಯೆಯಿಂದ ಬಹಳ ಕಷ್ಟಪಟ್ಟು ವಿಜಯ್ ತಮ್ನ ಕಾರಿನ ಬಳಿ ಹೋದರು. ಆದರೆ ಯಾರೋ ದುಷ್ಕರ್ಮಿ ವಿಜಯ್ ಮೇಲೆ ಚಪ್ಪಲಿ ಎಸೆಸಿದ್ದಾರೆ. ಎಸೆದ ಚಪ್ಪಲಿ ವಿಜಯ್ ರವರ ಬೆನ್ನಿಗೆ ತಾಗಿಗೊಂಡು ಮುಂದೆ ಹೋಗಿ ಬಿದ್ದಿದೆ. ಈ ವಿಡಿಯೋ ಹಾಗೂ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿವೆ.

ಇನ್ನೂ ವಿಜಯಕಾಂತ್ ರವರ ಅಂತಿಮ ದರ್ಶನಕ್ಕೆ ವಿಜಯ್ ಹೋಗಿದ್ದು, ವಾಪಸ್ಸು ಆಗುವ ವೇಳೆ ದುಷ್ಕರ್ಮಿಗಳು ವಿಜಯ್ ಮೇಲೆ ಚಪ್ಪಲಿ ಎಸೆದಿದ್ದಾರೆ. ಈ ಪೊಟೋ ಹಾಗೂ ವಿಡಿಯೋ ಸೋಷಿಯಲ್ ಮಿಡಿಯಾದಲ್ಲಿ ಭಾರಿ ವೈರಲ್ ಆಗುತ್ತಿದ್ದಂತೆ, ವಿಜಯ್ ದಳಪತಿ ಅಭಿಮಾನಿಗಳು ಆಕ್ರೋಷ ವ್ಯಕ್ತಪಡಿಸಿದ್ದಾರೆ. ಸಿನಿರಂಗದ ಹಿರಿಯ ನಟನಿಗೆ ಅಂತಿಮ ನಮನ ಸಲ್ಲಿಸಲು ಬಂದ ನಟನಿಗೆ ಈ ರೀತಿಯಲ್ಲಿ ನಡೆದುಕೊಳ್ಳುವುದು ಸರಿಯಲ್ಲ ಎಂದು ಕೆಲವರು ಕಾಮೆಂಟ್ ಮೂಲಕ ಆಕ್ರೋಷ ಹೊರಹಾಕಿದ್ದಾರೆ. ಜೊತೆಗೆ ಪೊಲೀಸರು ಅಂತಿಮ ದರ್ಶನಕ್ಕೆ ಸೂಕ್ತ ವ್ಯವಸ್ಥೆ ಮಾಡಿಲ್ಲ ಎಂಬ ಮಾತುಗಳೂ ಸಹ ಕೇಳಿಬಂದಿದೆ.

Most Popular

To Top