News

ಪತ್ನಿಯ ಅನೈತಿಕ ಸಂಬಂಧವನ್ನು ಪ್ರಶ್ನಿಸಿದ ಪತಿಯನ್ನೇ ಮುಗಿಸಿಬಿಟ್ಟ ಪತ್ನಿ, ಪ್ರಕರಣದ ಭೇದಿಸಿದ ಬೀದರ್ ಪೊಲೀಸರು….!

ಸಮಾಜದಲ್ಲಿ ಅನೈತಿಕ ಸಂಬಂಧಗಳ ಕಾರಣದಿಂದ ಹಲ್ಲೆಗಳು, ಕೊಲೆಗಳು ನಡೆಯುತ್ತಿರುತ್ತವೆ. ಅದೇ ಮಾದರಿಯಲ್ಲಿ ಅನೈತಿಕ ಸಂಬಂಧಗಳ ಕಾರಣದಿಂದ ಓರ್ವ ವ್ಯಕ್ತಿ ಕೊಲೆಯಾಗಿದ್ದಾನೆ. ಪತ್ನಿಯ ಅನೈತಿಕ ಸಂಬಂಧವನ್ನು ಪ್ರಶ್ನೆ ಮಾಡಿದ್ದಕ್ಕೆ ಪ್ಲಾನ್ ಮಾಡಿ ಆತನನ್ನು ಪತ್ನಿಯೇ ಕೊಲೆ ಮಾಡಿದ ಪ್ರಕರಣವನ್ನು ಬೀದರ್‍ ಪೊಲೀಸರು ಪ್ರಕರಣವನ್ನು ಬೇದಿಸಿದ್ದಾರೆ ಎಂದು ತಿಳಿದುಬಂದಿದೆ.

ಅನೈತಿಕ ಸಂಬಂಧವನ್ನು ಹೊಂದಿದ್ದ ಪತ್ನಿಯ ಕ್ರಮ ಪ್ರಶ್ನೆ ಮಾಡಿದ್ದಕ್ಕೆ ಪತಿಯನ್ನು ಕೊಲೆ ಮಾಡಲು ಪತ್ನಿ ಹಾಗೂ ಪ್ರಿಯಕರ ಸೇರಿ ಕೊಲೆ ಮಾಡಿದ್ದಾರೆ. ಈ ಘಟನೆ ಕಳೆದ ನವೆಂಬರ್‍ 11 ರಂದು ಬೀದರ್‍ ತಾಲೂಕಿನ ಅಲಿಯಂಬರ್‍ ಎಂಬ ಗ್ರಾಮದಲ್ಲಿ ನಡೆದಿತ್ತು. ನ.11 ರಂದು ಅಲಿಯಂಬರ್‍ ಗ್ರಾಮದ ಬಳಿ ಅಮಿತ್ ಎಂಬುವವರ ಶವ ಪತ್ತೆಯಾಗಿತ್ತು. ಆದರೆ ಇದನ್ನು ಅಪಘಾತ ಎಂದು ಬಿಂಬಿಸಲಾಗಿತ್ತು. ಆದರೆ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರಿಗೆ ಅನುಮಾನ ಮೂಡಿತ್ತು. ಈ ಪ್ರಕರಣವನ್ನು ಕೈಗೆತ್ತಿಕೊಂಡ ಪೊಲೀಸರು ತನಿಖೆ ಕೈಗೊಂಡಾಗ ಅಸಲೀ ಸತ್ಯ ಹೊರಬಂದಿದೆ.

ಅಮಿತ್ ಎಂಬುವವರ ಶವ ಪತ್ತೆಯಾದ ಜಾಗದಲ್ಲಿ ಸಕ್ರಿಯವಾಗಿದ್ದ ಮೊಬೈಲ್ ನಂಬರ್‍ ಗಳನ್ನು ಪತ್ತೆ ಹಚ್ಚಲಾಗಿದೆ. ಬಳಿಕ ವೆಂಕಟಗಿರಿ ಮಾತೆ, ಸಿಕ್ಕಿಂದರ್‍ ಶಾಹಾ ಹಾಗೂ ಆಕಾಶ್  ರವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಹತ್ಯೆಯ ಸತ್ಯಾಂಶ ಹೊರಬಂದಿದೆ.  ರವಿಪಾಟೀಲ್ ಎಂಬಾತ ಮೂರು ಮಂದಿಗೆ ಅಡ್ವಾನ್ಸ್ ಹಣ ನೀಡಿದ್ದರಂತೆ. ವಿಚಾರಣೆಯ ವೇಳೆ ಮೃತನ ಪತ್ನಿ ಚೈತ್ರಾ ತಮ್ಮ ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಕಾರಣದಿಂದ ಕೊಲೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾಳೆ. ಕೃತ್ಯಕ್ಕೆ ಬಳಸಿದ್ದ ರಾಡ್, ಮೊಬೈಲ್ ಹಾಗೂ ಕೊಲೆ ಮಾಡಲು ಸಹಚರರಿಗೆ ನೀಡಿದ ಅಡ್ವಾನ್ಸ್ ಹಣವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

Most Popular

To Top